ER NEWS
ಕರ್ನಾಟಕ ಜೀವನದಿಗಳಲ್ಲಿ ಒಂದಾದ ಕಾವೇರಿ ನದಿಯ ತೀಥೋದ್ಭವ ಮಂಗಳವಾರ ಆಗಲಿದೆ.ಪವಿತ್ರ ಕುಂಡಿಕೆಯಿಂದ ತೀರ್ಥವಾಗಿ ಬರಲಿರುವ ಕಾವೇರಿ ನದಿಯ ದರ್ಶನಕ್ಕೆ ಈಗಾಗಲೇ ಲಕ್ಷಾಂತರ ಭಕ್ತರು ಕಾತರರಾಗಿದ್ದಾರೆ. ಮಂಗಳವಾರ ಮಧ್ಯಾಹ್ನ 12.33 ಸಮಯಕ್ಕೆ ತುಲಾ ಸಂಕ್ರಮನ ಮುಹೂರ್ತದಲ್ಲಿ ತೀರ್ಥೋದ್ಭವವಾಗಲಿದೆ.
ಕಾವೇರಿ ತೀರ್ಥೋದ್ಭವದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.ಬೆಂಗಳೂರು, ತಮಿಳುನಾಡು, ಕೇರಳ ಹಾಗೂ ಇತರೆ ಕಡೆಗಳಿಂದ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸ್ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಇತರೆ ಅಧಿಕಾರಿಗಳು ಈಗಾಗಲೇ ಸಿದ್ಧತೆಗಳ ಪರಿಶೀಲನೆ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್, ಲಕ್ಷಾಂತರ ಭಕ್ತರ ಆಗಮನದ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಧಿಕೃತ ಪಾಸ್ ಹೊಂದಿರುವ ವಾಹನಗಳನ್ನು ಮಾತ್ರ ಭಾಗಮಂಡಲದಿಂದ ತಲಕಾವೇರಿ ವರೆಗೆ ಬಿಡಲಾಗುತ್ತದೆ ಎಂದರು.
ಆಹಾರ ಹಾಗೂ ನೀರು ಪೂರೈಕೆಗೆ ಹೆಚ್ಚುವರಿ ಕ್ರಮ ಕೈಗೊಳ್ಳಲಾಗಿದೆ. ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ.