ER NEWS

News Subject: 
ದಿನ ಭವಿಷ್ಯ: 17 ಅಕ್ಟೋಬರ್‌ 2017
Upload Image: 
Body: 

ನಿಮ್ಮ ಪಾಡಿಗೆ ನೀವಿದ್ದರೂ ನಿಮ್ಮನ್ನು ಮಾತನಾಡಿಸಿ ತಪ್ಪು ಹುಡುಕುವ ಜನರಿಂದ ಈದಿನ ಎಚ್ಚರದಿಂದಿರಿ. ಮೂರ್ಖರ ಜತೆ ವಾದ ಮಾಡಿ ಪ್ರಯೋಜನವಿಲ್ಲ. ಆದಷ್ಟು ಈದಿನ ಮೌನವಾಗಿದ್ದು ಗಣಪತಿಯ ಆರಾಧನೆ ಮಾಡಿರಿ.

ವೃಷಭ:- ಹಿರಿಯರ ಆಶೀರ್ವಾದದಿಂದ ಈದಿನ ನಿಮ್ಮ ಕಾರ್ಯಗಳು ಕೈಗೂಡುವವು. ಹೀಗಾಗಿ ಹಿರಿಯರ ಸಹಾಯವನ್ನು ಕಡೆಗಣಿಸದಿರಿ. ನಿಮಗೆ ಇರದ ಅನುಭವಗಳ ಭಂಡಾರ ಹಿರಿಯರಿಂದ ಇಂದು ನಿಮಗೆ ಲಭ್ಯವಾಗಲಿದೆ.

ಮಿಥುನ:- ಕುಟುಂಬ ಕಲಹದಿಂದ ಮನಸ್ಸಿಗೆ ಅಶಾಂತಿ ಉಂಟಾಗುವುದು. ಹಿರಿಯರ ಮಧ್ಯಸ್ಥಿಕೆಯಿಂದ ಕಲಹ ಶಮನಗೊಳ್ಳುವುದು. ಪತಿ-ಪತ್ನಿಯರು ಈದಿನ ಶಿವನ ದೇವಾಲಯಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿರಿ.

ಕಟಕ:- ಪರಾಕ್ರಮ ಕೆಲಸಗಳು ಸುಸೂತ್ರವಾಗಿ ನಡೆಯುವುದು. ಆದಾಗ್ಯೂ ನಿಮ್ಮ ಎದುರಾಳಿಗಳು, ಪ್ರತಿಸ್ಪರ್ಧಿಗಳು ತಲೆನೋವಿಗೆ ಕಾರಣರಾಗುತ್ತಾರೆ. ಭಕ್ತಿಯಿಂದ ಲಕ್ಷ್ಮೀನಾರಸಿಂಹ ದೇವರನ್ನು ಇಲ್ಲವೇ ವೀರಭದ್ರ ದೇವರನ್ನು ಸ್ಮರಿಸಿಕೊಳ್ಳಿರಿ.

ಸಿಂಹ:- ನಿಮ್ಮ ಎಲ್ಲ ಕಾರ್ಯಗಳು ಸುಗಮವಾಗಿ ಸಾಗುವವು. ಆದರೆ ನಿಮ್ಮ ಕಠೋರ ಮಾತು ಇತರರನ್ನು ಘಾಸಿಗೊಳಿಸವುದು. ಇದರಿಂದಾಗಿ ಆವರು ಹಣಕಾಸಿನ ವ್ಯವಹಾರದಲ್ಲಿ ಸಂಶಯ ತಾಳುವರು.

ಕನ್ಯಾ:- ಕೈ ಧಾರಾಳತನವಿರುವ ನೀವು ಇಂದಿನಿಂದ ಹಣ ಕೂಡಿಡುವ ಪರಿಪಾಠವನ್ನು ಬೆಳೆಸಿಕೊಳ್ಳಬೇಕು. ಏಕೆಂದರೆ ನಿಮ್ಮ ಆಪತ್ಕಾಲದಲ್ಲಿ ಯಾರೂ ನಿಮಗೆ ಸಹಾಯ ಮಾಡುವುದಿಲ್ಲ. ಈ ಬಗ್ಗೆ ನಿಮಗೆ ಮಕ್ಕಳು ಸಹಕರಿಸುವರು.

ತುಲಾ:- ನಿಮಗೆ ವಹಿಸಿದ ಕಾರ್ಯವನ್ನು ಶ್ರದ್ಧೆಯಿಂದ ಮಾಡಿರಿ. ಇದರಿಂದ ನಿಮ್ಮ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ. ಹಣಕಾಸು ಕೂಡ ನಿಮಗೆ ಸಕಾಲದಲ್ಲಿ ಒದಗಿ ಬರುವುದು. ಮನೆಯ ಕುಟುಂಬದ ಹಿರಿಯರ ಆರೋಗ್ಯದ ಕಡೆ ಗಮನ ನೀಡಿರಿ.

ವೃಶ್ಚಿಕ:- ಇಂದು ನಿಮ್ಮ ಮಾತಿನಿಂದ ಸಮಸ್ಯೆಗಳು ಎದುರಾಗುವುದು. ಹಾಗಾಗಿ ಈದಿನ ಎಚ್ಚರಿಕೆ ಅಗತ್ಯ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಆಂಜನೇಯ ಸ್ತೋತ್ರ ಪಠಿಸಿರಿ. ಹಣಕಾಸು ಸ್ಥಿತಿ ಸಾಧಾರಣ.

ಧನಸ್ಸು:- ತಣ್ಣೀರನ್ನು ಆರಿಸಿ ಕುಡಿಯುವ ಕಾಲ. ಹಾಗಾಗಿ ನಿಮ್ಮ ಎದುರಾಳಿಯು ಆಡಿದ ಮಾತಿಗೆ ತಕ್ಷ ಣವೇ ಪ್ರತಿಕ್ರಿಯಿಸುವುದು ಈದಿನ ಸೂಕ್ತವಲ್ಲ. ಹಾಗಾಗಿ ಇದು ನಿಮ್ಮ ಸೋಲಲ್ಲ. ಸೋತಂತೆ ನಟಿಸಿ ಗೆಲ್ಲುವ ಪ್ರಯತ್ನ.

ಮಕರ:- ಕೆಲ ಗ್ರಹಗಳ ಅಶುಭ ಸಂಚಾರದಿಂದಾಗಿ ವೃಥಾ ಸರಕಾರಕ್ಕೆ ದಂಡ ತೆರುವ (ಪೊಲೀಸರಿಗೆ) ಮೂಲಕ ಹಣ ಖರ್ಚಾಗುವುದು. ಸಂಚಾರ ನಿಯಮ ಪಾಲಿಸಿ ಮತ್ತು ಸೂಕ್ತ ದಾಖಲೆಗಳನ್ನು ಇಟ್ಟುಕೊಳ್ಳಿ.

ಕುಂಭ:- ವ್ಯಾಪಾರ-ವ್ಯವಹಾರಸ್ಥರಿಗೆ ಸಾಧಾರಣ ಫಲ ಕಂಡುಬರುವುದು. ಕೃಷಿಕರಿಗೆ ಸರಕಾರದ ಧನ ಸಹಾಯ ದೊರೆಯುವುದು. ಮನೆಯ ಇತರೆ ಕಾರ್ಯಗಳು ಮಂದಗತಿಯಿಂದ ಸಾಗುವುದು. ಕುಲದೇವರನ್ನು ಪ್ರಾರ್ಥಿಸಿರಿ.

ಮೀನ:- ರಾಜಕೀಯ ನೇತಾರರಿಗೆ ಗುರುವಿನ ರಕ್ಷೆ ಇರುವುದರಿಂದ ಸಮಾಜದಲ್ಲಿ ನಿಮ್ಮ ಮಾತಿಗೆ ಬೆಲೆ ಬರುವುದು. ಸಂಘ ಸಂಸ್ಥೆಗಳ ಚುನಾವಣೆಗಳಲ್ಲಿ ಯಶಸ್ಸು ಹೊಂದುವಿರಿ. ಇದರಿಂದ ಜನಪ್ರಿಯತೆ ಹೆಚ್ಚುವುದು.

Reach Count: 
1