ER NEWS

News Subject: 
ಬಿಜೆಪಿಗೆ ಸೇರುವ ಯೋಗೇಶ್ವರ್ ಮದ್ದೂರಲ್ಲಿ ಸ್ಪರ್ಧೆ ಬಹುತೇಕ ಖಚಿತ
Upload Image: 
Body: 

ಬಿಜೆಪಿಯಲ್ಲಿದ್ದು, ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಚನ್ನಪಟ್ಟಣ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಸಿ.ಪಿ. ಯೋಗೇಶ್ವರ್ ಇದೀಗ ಕಾಂಗ್ರೆಸ್ ತೊರೆದಿದ್ದು ಬಿಜೆಪಿಗೆ ಸೇರ್ಪಡೆಯಾಗಿ ಚನ್ನಪಟ್ಟಣ ಕ್ಷೇತ್ರ ಬಿಟ್ಟು ಮದ್ದೂರಲ್ಲಿ ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ ಎನ್ನಲಾಗಿದೆ. ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿಯಿಂದ ಬೇಸತ್ತು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾಗಿ ಹೇಳುವ ಸಿ.ಪಿ. ಯೋಗೇಶ್ವರ್ ಸದ್ಯ ನಾನು ಯಾವ ಪಕ್ಷಕ್ಕೆ ಸೇರಬೇಕು ಎನ್ನುವುದರ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಹೇಳುತ್ತಿದ್ದಾರೆಯಾದರೂ ಅವರು ಈಗಾಗಲೇ ಬಿಜೆಪಿಯತ್ತ ಮನಸ್ಸು ಮಾಡಿದ್ದು ಮುಂದಿನ 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಮದ್ದೂರು ಕ್ಸ್ಥೆತ್ರದಿಂದ ಬಿಜೆಪಿ ಇಂದ ಚುನಾವಣೆಗೆ ಇಳಿಯುವುದು ಬಹುತೇಕ ಖಚಿತವಾಗಿದೆ. ಚೆನ್ನಪಟ್ಟಣದಲ್ಲಿ ತಮ್ಮ ಪುತ್ರಿಯನ್ನು ಬಿಜೆಪಿ ಇಂದ ಕಣಕ್ಕಿಳಿಸುವ ಸಾಧ್ಯತೆ ಇದೆ. ಈ ಹಿಂದೆ ElectReps ಯೋಗೇಶ್ವರ್ BJP ಗೆ ಸೇರುವ ಬಗ್ಗೆ ವರದಿಮಾಡಿತ್ತು

Reach Count: 
1