ER NEWS

News Subject: 
ಉಸ್ತುವಾರಿ ವೇಣುಗೋಪಾಲ್ ಎದುರಲ್ಲೇ ಕಾಂಗ್ರೆಸ್ ಮುಖಂಡರ ಗಲಾಟೆ
Upload Image: 
Body: 

ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರ ನಡುವೆ ವಾಕ್ಸಮರ ನಡೆದಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಉಸ್ತುವಾರಿ ಸಚಿವ ಹೆಚ್. ಆಂಜನೇಯ ಅವರ ಸಮ್ಮುಖದಲ್ಲೇ ಪಕ್ಷದ ಮುಖಂಡರು ಗಲಾಟೆ ಮಾಡಿಕೊಂಡಿದ್ದಾರೆ. ಚಿತ್ರದುರ್ಗದ ವೀರಸೌಧದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಮಾರಂಭದಲ್ಲಿ ವೇಣುಗೋಪಾಲ್ ಮಾತನಾಡುವಾಗ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆರ್.ಕೆ. ಸರ್ದಾರ್ ಅವರು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಿತ್ರದುರ್ಗದಿಂದ ಮುಸ್ಲಿಂ ಸಮುದಾಯದವರಿಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದಾರೆ.

ಇದಕ್ಕೆ ಅಲ್ಲಿದ್ದ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಆರ್. ಮಂಜುನಾಥ್ ವೇದಿಕೆಯಿಂದ ಕೆಳಗಿಳಿಯುವಂತೆ ತಿಳಿಸಿದ್ದಾರೆ. ಆಗ ಸರ್ದಾರ್ ಮತ್ತು ಮಂಜುನಾಥ್ ಬೆಂಬಲಿಗರ ನಡುವೆ ವಾಕ್ಸಮರ ನಡೆದಿದೆ. ವೇಣುಗೋಪಾಲ್ ಎಷ್ಟೆಲ್ಲಾ ಸಮಾಧಾನಪಡಿಸಿದರೂ, ಕೇಳದ ಮುಖಂಡರು ಆರೋಪ, ಪ್ರತ್ಯಾರೋಪ ಮಾಡಿದ್ದಾರೆ. ಕೊನೆಗೆ ಪ್ರತ್ಯೇಕ ಸಭೆ ನಡೆಸಿದ ಪಕ್ಷದ ನಾಯಕರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Reach Count: 
1