ER NEWS
ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಮುಖ್ಯಮಂತ್ರಿಯಾಗುತ್ತಾರೆ ಹೀಗೆ ಹೇಳಿದ್ದು ಬೇರೆ ಯಾರು ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನಗಳಿಗೆ ಬೇಸತ್ತು ಪಕ್ಷ ತೊರೆದು ಸದ್ಯ ಜೆಡಿಎಸ್ ನಲ್ಲಿರುವ ಎಂದು ಮಾಜಿ ಸಂಸದ ಹೆಚ್. ವಿಶ್ವನಾಥ್. ಕನ್ನಡದ ದಿನಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನಲ್ಲಿ ತಮ್ಮ ಅಭಿಪ್ರಾಯದಲ್ಲಿ ಹಂಚಿಕೊಂಡಿರುವ ಅವರು ರಾಜ್ಯದಲ್ಲಿ ಮರಳಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಮ್ಯ ಅವರು ಮುಖ್ಯಮಂತ್ರಿ ಹುದ್ದೆಗೇರಲು ಅವರಿಗಿರುವ ಅರ್ಹತೆಗಳೇನು ಎನ್ನುವುದನ್ನು ಅವರು ಬಿಡಿಸಿ ಹೇಳಿದ್ದಾರೆ.
ಇದೇ ವೇಳೆ ಅವರು ಸಿದ್ದರಾಮಯ್ಯ ಅಂದುಕೊಂಡಂತೆ ಮತ್ತೆ ಸಿಎಂ ಆಗಲು ಸಾಧ್ಯವೇ ಇಲ್ಲ. ಅಷ್ಟಕ್ಕೂ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಬರುವುದಿಲ್ಲ. ಒಂದು ವೇಳೆ ಬಹುಮತ ಬಂದರೆ ಮುಖ್ಯಮಂತ್ರಿಯಾಗುವುದು ರಮ್ಯಾ, ಸಿದ್ದರಾಮಯ್ಯ ಅಲ್ಲ," ಎಂದು ಸ್ಪಷ್ಟವಾಗಿ ಹೇಳಿದರು.
"ಖರ್ಗೆ, ಪರಮೇಶ್ವರ್ ಸೇರಿದಂತೆ ರಾಜ್ಯ ಕಾಂಗ್ರೆಸ್ನ ಯಾರಿಗೂ ಧೈರ್ಯವಿಲ್ಲ. ರಮ್ಯಾ ಮಹಾಬುದ್ಧಿವಂತ ಹೆಣ್ಣುಮಗಳು," ದಿನ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.