ER NEWS
ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಜ್ವರ, ನೆಗಡಿ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದು ಸದ್ಯ ಅವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪೋಲೊ ಆಸ್ಪತ್ರೆಗೆ ನಿನ್ನೆ ರಾತ್ರಿ ಅವರು ಬನ್ನೇರುಘಟ್ಟ ರಸ್ತೆಯ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ನಿನ್ನೆ ರಾತ್ರಿ ಅನಾರೋಗ್ಯಕ್ಕೆ ತುತ್ತಾದ ಬಿಎಸ್ವೈರನ್ನು ಅವರ ಡಾಲರ್ಸ್ ಕಾಲನಿಯ ನಿವಾಸದಿಂದ ಅಪೋಲೊ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ. ಆಸ್ಪತ್ರೆಯ ವೈದ್ಯ ಡಾ. ಪ್ರಮೋದ್ ನಿನ್ನೆಯಿಂದ ಅವರಿಗೆ ಚಿಕಿತ್ಸೆ ಮುಂದುವರಿಸಿದ್ದಾರೆ. ಇದೇ ವೇಳೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗುವುದಕ್ಕೆ ಕಾರಣ ರಾಜ್ಯ ವಿವಿಧ ಊರುಗಳಿಗೆ ಅವರು ತೆರಳಿ ಪಕ್ಷದ ಪರ ಪ್ರಚಾರ ನಡೆಸುತ್ತಿದ್ದು, ಹೀಗಾಗಿ ವಾತಾವರಣದ ಬದಲಾವಣೆಯಿಂದ ಅವರಿಗೆ ಜ್ವರ, ನೆಗಡಿ ಕಾಡಿದೆ. ಕೊಂಚ ರಕ್ತದೊತ್ತಡ ಕೂಡ ಹೆಚ್ಚಿರುವುದರಿಂದ ಒಂದು ದಿನ ಆಸ್ಪತ್ರೆಯಲ್ಲಿ ಇರಿಸಿಕೊಂಡು ಚಿಕಿತ್ಸೆ ನೀಡುತ್ತಿದ್ದೇವೆ. ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.