ER NEWS

News Subject: 
ರಾಮನಗರ : ಕೆರೆಗೆ ನುಗ್ಗಿದ ಕಾರು, ಇಬ್ಬರು ಮಕ್ಕಳು ಸೇರಿದಂತೆ ಮೂವರ ಸಾವು
Body: 

ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಕೆರೆಗೆ ನುಗ್ಗಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ರಾಮನಗರ ಸಮೀಪದ ಮನಗಾನಹಳ್ಳಿ ಬಳಿ ನಡೆದಿದೆ. ಬೆಂಗಳೂರಿನ ಗಣಪತಿಪುರ ನಿವಾಸಿ ಶಶಾಂಕ್, ಅಕ್ಕನ ಮಕ್ಕಳೊಂದಿಗೆ ತಮ್ಮ ಸಂಬಂಧಿಕರ ಮನೆಗೆ ತೆರಳುವ ವೇಳೆ ಈ ದುರಂತ ಸಂಭವಿಸಿದೆ. ಈ ವೇಳೆ ಗ್ರಾಮಸ್ಥರು ಕೆರೆಗೆ ಧುಮುಕಿ ಕಾರಿನಲ್ಲಿದ್ದವರನ್ನು ರಕ್ಷಿಸುವ ಪ್ರಯತ್ನ ನಡೆಸಿದರೂ ಇಬ್ಬರು ಮಕ್ಕಳು ಮತ್ತು ಕಾರು ಚಾಲನೆ ಮಾಡುತ್ತಿದ್ದ ಶಶಾಂಕ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ದಿಲೀಪ್ ರಕ್ಷಿಸಲ್ಪಟ್ಟಿದ್ದಾನೆ.
ಘಟನೆ ಸಂಬಂಧ ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Reach Count: 
1