ER NEWS

News Subject: 
ಸಕ್ರಿಯ ರಾಜಕೀಯಕ್ಕೆ ಪರಮೇಶ್ವರ್ ಗುಡ್ ಬೈ?
Upload Image: 
Body: 

ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು 2018 ರ ನಂತರ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯಲು ನಿರ್ಧರಿಸಿದ್ದು, ಈ ಕುರಿತು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಇದೇ ನನ್ನ ಕೊನೆಯ ಚುನಾವಣೆ, ನಾನು ಈ ಚುನಾವಣೆಯಲ್ಲಿ ಕೊರಟಗೆರೆಯಿಂದಲೇ ಸ್ಪರ್ಧಿಸುತ್ತೇನೆ ಎಂದು ಪರಮೇಶ್ವರ್ ಎಂದು ಹೇಳಿಕೊಂಡಿದ್ದಾರೆ. ಇತ್ತೀಚಿಗೆ ಕೊರಟಗೆರೆಯಲ್ಲಿ ಪರಮೇಶ್ವರ್ ಒಂದು ವಾರ ಕಾಲ ಬೀಡು ಬಿಟ್ಟಿದ್ದರು.

ಕೆಲವೊಂದು ವೈಯಕ್ತಿಕ ಕಾರಣಗಳಿಂದ ಪರಮೇಶ್ವರ್ ಅವರು ರಾಜಕೀಯದಿಂದ ದೂರ ಸರಿಯಲು ನಿರ್ಧರಿಸಿದ್ದಾರೆ. ಆದರೆ ಪರಮೇಶ್ವರ್ ಅವರ ಮಾತು ಎಷ್ಟು ಸತ್ಯ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

Reach Count: 
1