Public News

News Subject: 
'ಬಬ್ರುವಾಹನ' ಚಿತ್ರದ ನಿರ್ಮಾಪಕ ಚಂದ್ರಶೇಖರ್ ಇನ್ನಿಲ್ಲ
Upload Image: 
PublicNext--514341--node-nid
Category: 
Cinema
Body: 

ಬೆಂಗಳೂರು: 'ಹುಲಿ ಹಾಲಿನ ಮೇವು', 'ಬಬ್ರುವಾಹನ' ಚಿತ್ರಗಳ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್(69) ನಿಧನರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಚಂದ್ರಶೇಖರ್ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿಯೂ ಚಂದ್ರಶೇಖರ್ ಆಯ್ಕೆ ಆಗಿದ್ದರು. ಶಿವಾನಂದ ಸರ್ಕಲ್ ಬಳಿ ಇರುವ ಮೃತರ ನಿವಾಸದಲ್ಲಿ ಇಂದು ಬೆಳಗ್ಗೆ 9 ಗಂಟೆಯಿಂದ ಅಂತಿಮ ದರ್ಶನ ಪಡೆಯಬಹುದಾಗಿದೆ.

Reach Count: 
35713