Kshetra Samachara

Local News Subject: 
ಕೂಳೂರು ಸೇತುವೆ ಮೇಲೆ ಸಂಚರಿಸುವವರಿಗೆ ಸಂಚಕಾರ : ಚಾಲಕರ ಪರದಾಟ
City: 
Udupi
Mangalore
Upload Image: 
PublicNext--514512--node-nid
Category: 
Infrastructure
Body: 

ಮಂಗಳೂರು : ರಸ್ತೆ ಸರಳವಾಗಿರುವಾಗಲೇ ಮಳೆಗಾಲದಲ್ಲಿ ವಾಹನ ಓಡಾಟ ತುಸು ಕಷ್ಟ ಇದರ ಮಧ್ಯೆ ಕೂಳೂರು ಹಳೆ ಸೇತುವೆಯಲ್ಲಿ ಭಾರೀ ಗಾತ್ರದ ಹೊಂಡಗಳಲ್ಲಿ ಮಳೆ ನೀರು ತುಂಬಿದ್ದು ವಾಹನ ಚಾಲಕರು ಪರದಾಡುವಂತಾಗಿದೆ. ಮೈಕ್ರೋ ಟೆಕ್ನಾಲಜಿ ಮೂಲಕ 38 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಮಾಡಲಾದ ಕೂಳೂರು ಹಳೇ ಸೇತುವೆಯ ಇಕ್ಕೆಲಗಳಲ್ಲಿ ಇದೀಗ ಹೊಂಡ ಬೀಳಲಾರಂಭಿಸಿದೆ. ಡಾಮರು ತೇಪೆ ಹಾಕಿ ಒಂದೆರಡು ತಿಂಗಳು ಕಳೆಯುವುದರೊಳಗೆ ಒಂದೇ ಮಳೆಗೆ ಅಲ್ಲಲ್ಲಿ ಹೊಂಡ ಬಿದ್ದಿದ್ದು, ಸೋಮವಾರ ಮಳೆಯ ನಡುವೆ ಹೆದ್ದಾರಿ ಇಲಾಖೆ ತೇಪೆ ಹಾಕಲು ಮುಂದಾಗಿದ್ದು ಲಾಕ್ ಡೌನ್ ವಿನಾಯಿತಿ ಸಂದರ್ಭ ನೂರಾರು ವಾಹನಗಳು ಹೆದ್ದಾರಿ ಉದ್ದಕ್ಕೂ ಸಾಲುಗಟ್ಟಿ ನಿಲ್ಲಬೇಕಾಯಿತು. ಇದರಿಂದ ಟ್ರಾಫಿಕ್ ಜಾಮ್ ಕೂಡಾ ಕಂಡುಬಂದಿದೆ.

Reach Count: 
8316