Public News
News Subject:
ಲಾರಿ, ಕಾರ್ ಡಿಕ್ಕಿ; ಒಂದೂವರೆ ತಿಂಗಳ ಹಿಂದಷ್ಟೇ ಮದ್ವೆಯಾಗಿದ್ದ ಎಂಜಿನಿಯರ್ ಸ್ಥಳದಲ್ಲೇ ಸಾವು
Upload Image:
Category:
Crime
Accident
Body:
ಬೀದರ್: ಕಾರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಕಾರ್ ಚಾಲನೆ ಮಾಡುತ್ತಿದ್ದ ಇಂಜಿನಿಯರ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಶಿವಪುರ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಬಾಲ್ಕಿ ತಾಲ್ಲೂಕು ಡೊಂಗರಗಿ ಗ್ರಾಮದ ಅಮರ್ ಬೀರಾದರ್ (35) ಮೃತ ದುರ್ದೈವಿ. ಅಮರ್ ಅವರು ಒಂದೂವರೆ ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದನು. ಬೆಂಗಳೂರಿನಲ್ಲಿ ಸಿವಿಲ್ ಎಂಜಿನಿಯರ್ ಅಮರ್ ಅವರು ಲಾಕ್ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ತಮ್ಮ ಸ್ವಗ್ರಾಮ ಡೊಂಗರಗಿಗೆ ಹೋಗುತ್ತಿದ್ದರು. ಈ ವೇಳೆ ಶಿವಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಹೊಗಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಕಾರಿನ ಮುಂಭಾಗ ಪೂರ್ಣ ಜಖಂ ಅಗಿ ಅಮರ್ ಬೀರಾದರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಕೂಡ್ಲಿಗಿ ಸಿಪಿಐ ವಸಂತ ಅಸೋದೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಸಂಬಂಧ ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Reach Count:
25885