Public News

News Subject: 
ಪೊಲೀಸರಿಗೆ ಸ್ಟಾರ್ ಬದಲು ಬಿಜೆಪಿ ಬ್ಯಾಡ್ಜ್ ಕೊಡಿ : ಡಿಕೆಶಿ ಗರಂ
Upload Image: 
PublicNext--514786--node-nid
Category: 
Politics
Body: 

ಬೆಂಗಳೂರು: ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿಯ ಬ್ಯಾಡ್ಜ್ ಮತ್ತು ಬಾವುಟ ಕೊಡಿ. ಅವರು ತಮ್ಮ ಸ್ಟಾರ್ ತೆಗೆದು ಬಿಜೆಪಿ ಬ್ಯಾಡ್ಜ್ ಹಾಕಿಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪೊಲೀಸರ ವಿರುದ್ಧ ಹರಿಹಾಯ್ದಿದ್ದಾರೆ.ಕಾಂಗ್ರೆಸ್ ನಾಯಕರು ತಮ್ಮ ಹಣದಲ್ಲಿ ಜನರಿಗೆ ಸಹಾಯ ಮಾಡಲು ಹೋದರೆ ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಬೋರ್ಡ್ ಗಳನ್ನು ಕಿತ್ತು ಹಾಕಿಸಿದ್ದಾರೆ. ಪಾಪ ಆ ಪೊಲೀಸ್ ಅವರಿಗೆ ನಮ್ಮ ಸಹವಾಸ ಗೊತ್ತಿಲ್ಲ ಎಂದಿದ್ದಾರೆ.

ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ನೆರವು ವಿತರಣೆ ಕಾರ್ಯಕ್ರಮ ನಿಲ್ಲಿಸಿದರೆ ಠಾಣೆ ಮುಂದೆ ಧರಣಿ ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಷ್ಟದ ಸಮಯದಲ್ಲಿ ಬಡವರಿಗೆ ನೆರವಾಗುವುದನ್ನು ತಡೆಯುತ್ತೀರಲ್ಲ ನೀವು ಮನುಷ್ಯರಾ ಅಥವಾ ದನಗಳಾ? ಮಂತ್ರಿ, ಶಾಸಕ ಹೇಳಿದ ಮಾತ್ರಕ್ಕೆ ಕಾಂಗ್ರೆಸ್ ಬಾವುಟ ಕಿತ್ತು ಹಾಕಲು ಬಂದಿದ್ದೀರಾ.

ಸರ್ಕಾರದ ಕಿಟ್ ಗೆ ತಮ್ಮ ಫೋಟೋ ಹಾಕಿಕೊಂಡು ಬಿಜೆಪಿ ನಾಯಕರು ಹಂಚುವಾಗ ಈ ಪೊಲೀಸ್ ಅಧಿಕಾರಿಗಳು ಎಲ್ಲಿದ್ದರು? ಮಲಗಿದ್ದರಾ? ಮಾನ ಮರ್ಯಾದೆ ಇದ್ದರೆ ಬಡವರ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. ನಿಮ್ಮ ಕಾನ್ಸ್ಟೇಬಲ್ ಗಳಿಗೆ ನೀವು ಸಹಾಯ ಮಾಡಿದ್ದೀರಾ? ಜನರಿಗೆ ನಮ್ಮ ನಾಯಕರು ಸಹಾಯ ಮಾಡುತ್ತಿದ್ದಾರೆ. ಅವರಿಗೆ ಯಾವುದೇ ಲಂಚ, ಸಂಬಳ ಇಲ್ಲ ಆದರೂ ತಮ್ಮ ಹಣದಲ್ಲಿ ನೀಡುತ್ತಿದ್ದಾರೆ ಎಂದರು.

Reach Count: 
30356