Kshetra Samachara
ಹುಬ್ಬಳ್ಳಿ : ರಾಜಕೀಯ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದು ಕಾನೂನು ಬಾಹಿರ ಎಂದು ಗೊತ್ತಿದ್ದರೂ ಕೂಡ ಇಲ್ಲೊಬ್ಬ ಕಾಂಗ್ರೆಸ್ ನಾಯಕ ಲಾಕ್ ಡೌನ್ ಸಂದರ್ಭದಲ್ಲಿ ಫುಡ್ ಕಿಟ್ ವಿತರಣೆಯ ನೆಪದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡು ನಿಯಮ ಉಲ್ಲಂಘನೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ.
ಫುಡ್ ಕಿಟ್ ಹಂಚುವ ನೆಪದಲ್ಲಿ ಮಾಜಿ ಸಚಿವ ಸಂತೋಷ ಲಾಡ್ ಮಕ್ಕಳ ಬಳಕೆ ಮಾಡಿಕೊಂಡಿದ್ದಾರೆ. ಅಲ್ಲದೆ ಕೋವಿಡ್ ನಿಯಮ ಉಲ್ಲಂಘನೆ ಮಾಡುತ್ತಿದ್ದು ಮಾಸ್ಕ್ ಧರಿಸದೇ ಸಾವಿರಾರು ಜನರನ್ನು ಸೇರಿಸುತ್ತಿರುವ ಸಂತೋಷ ಲಾಡ್ ಸರ್ಕಾರದ ಕೋವಿಡ್ ನಿಯಮಕ್ಕೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ.
ಇನ್ನೂ ದೈಹಿಕ ಅಂತರಕ್ಕಂತೂ ಕಿಮ್ಮತ್ತು ಇಲ್ಲದೇ ಸ್ವತಃ ಮಾಸ್ಕ್ ಧರಿಸದ ಸಂತೋಷ ಲಾಡ್ ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ದರ್ಬಾರ್ ನಡೆಸಿದ್ದಾರೆ. ಮಕ್ಕಳು ಸೇರಿದಂತೆ ಸಾವಿರಾರು ಜನ ಸಾರ್ವಜನಿಕರನ್ನು ಸೇರಿಸಿ ಪ್ರಚಾರ ನಡೆಸಿದ್ದಾರೆ. ಅಲ್ಲದೇ ಈಗನಿಂದಲೇ ಚುನಾವಣೆ ಪ್ರಚಾರ ಆರಂಭಿಸಿರುವ ಲಾಡ್ ಕಳೆದ ಮೂರು ನಾಲ್ಕು ದಿನಗಳಿಂದ ಕಲಘಟಗಿ ಕ್ಷೇತ್ರದಲ್ಲಿಯೇ ಬೀಡು ಬಿಟ್ಟಿದ್ದಾರೆ.ಈ ವೇಳೆ ಮಾಸ್ಕ್ ಧರಿಸದ ಮಕ್ಕಳನ್ನು ಬಳಕೆ ಮಾಡಿಕೊಂಡಿದ್ದು, ಲಾಡ್ ವಿರುದ್ದ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಬೇಕಿದೆ ಎಂಬುವುದು ಸಾರ್ವಜನಿಕರ ಆಗ್ರಹವಾಗಿದೆ.