Kshetra Samachara
ಧಾರವಾಡ: ತೈಲ ಬೆಲೆ ಏರಿಕೆ ಖಂಡಿಸಿ ಶಾಸಕರಾದ ಆರ್.ವಿ.ದೇಶಪಾಂಡೆ ಹಾಗೂ ಪ್ರಸಾದ ಅಬ್ಬಯ್ಯ ನೇತೃತ್ವದಲ್ಲಿ ಧಾರವಾಡದ ನರೇಗಲ್ ಪೆಟ್ರೋಲ್ ಬಂಕ್ ಎದುರು ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಪೆಟ್ರೋಲ್ ಬಂಕ್ ಎದುರು ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರ, ನರೇಂದ್ರ ಮೋದಿ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧವೂ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಶಾಸಕ ಆರ್.ವಿ.ದೇಶಪಾಂಡೆ, ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ತೈಲ ಬೆಲೆ 60 ರೂಪಾಯಿ ಇತ್ತು. ಈಗ 100 ರೂಪಾಯಿ ಆಗಿದೆ. ಮೋದಿ ಮೊದಲು ಬಹಳಷ್ಟು ಟ್ರೆಂಡ್ ಕ್ರಿಯೇಟ್ ಮಾಡಿದ್ದರು. ಈಗ ಆ ಸ್ಥಿತಿ ಉಳಿದಿಲ್ಲ ಎಂದರು.
ದಿನೇ ದಿನೇ ತೈಲ ಬೆಲೆ ಏರಿಕೆ ಆಗುತ್ತಲೇ ಇದ್ದು, ಕೂಡಲೇ ಕೇಂದ್ರ ಸರ್ಕಾರ ಬೆಲೆ ಇಳಿಕೆ ಮಾಡಬೇಕು. ಮೋದಿ ಅವರ ಅಚ್ಛೇ ದಿನ ನಮಗೆ ಬೇಕಾಗಿಲ್ಲ. ಬೆಲೆ ಏರಿಕೆಯೇ ಇವರ ಅಚ್ಛೇ ದಿನ ಆಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ವಿರುದ್ಧ ಹರಿಹಾಯ್ದರು.