Kshetra Samachara

Local News Subject: 
ಶಿವಪುರದಲ್ಲಿ ಮಳೆಹಾನಿ ಜಿಲ್ಲಾಧಿಕಾರಿ ಜಿ.ಜಗದೀಶ್ ಭೇಟಿ ಪರಿಶೀಲನೆ.
City: 
Udupi
Mangalore
Video Thumbnail: 
PublicNext-475051-514959-Udupi-Mangalore-Government-News-node
Category: 
Government
News
Body: 

ಹೆಬ್ರಿ:ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ದೇವಸ್ಥಾನಬೆಟ್ಟು ಬೋರುಗುಡ್ಡೆ ಎಂಬಲ್ಲಿ ಮುಂಗಾರು ಗಾಳಿ,ಮಳೆಗೆ ಶ್ರೀನಿವಾಸ್ ಎಂಬುವವರ ಮನೆಯ ಮೇಲೆ ಆಕೇಶಿಯಾ ಮರ ಬಿದ್ದು ಹಾನಿಯಾಗಿದ್ದು. ಸುಮಾರು 50 ಸಾವಿರ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು,ಈ ಹಿನ್ನೆಲೆಯಲ್ಲಿ ಸೋಮವಾರ ಉಡುಪಿ ಜಿಲ್ಲಾದಿಕಾರಿ ಜಿ. ಜಗದೀಶ್ ಸ್ಥಳಕ್ಕೆ ಆಗಮಿಸಿ ಭೇಟಿ ನೀಡಿ ಪರಿಶೀಲಿಸಿ. ಪ್ರಕೃತಿ ವಿಕೋಪದಡಿಯಲ್ಲಿ ಸರಕಾರದಿಂದ ಪರಿಹಾರ ದೊರಕಿಸಿ ಕೊಡುವುದಾಗಿ ಭರವಸೆ ನೀಡಿ. ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಹೆಬ್ರಿ ತಹಸೀಲ್ದಾರ್ ಪುರಂದರ್ ಕೆ. ಕಂದಾಯ ನಿರೀಕ್ಷಕ ಹಿತೇಶ್ . ತಾಲೂಕು ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ರಮೇಶ್ ಪೂಜಾರಿ, ಶಿವಪುರ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷ ಸುರೇಶ್ ಶೆಟ್ಟಿ ಶಿವಪುರ ಹಾಗೂ ಗ್ರಾಮ ಸಹಾಯಕರು ಮತ್ತಿತರರು ಉಪಸ್ಥಿತರಿದ್ದರು .

Reach Count: 
6801