Kshetra Samachara

Local News Subject: 
ಧಾರವಾಡ: ಮುಖ್ಯಮಂತ್ರಿ ಬದಲಾವಣೆ ಬಿಜೆಪಿಯ ಆಂತರಿಕ ಸಮಸ್ಯೆ
City: 
Hubballi-Dharwad
Category: 
Politics
Body: 

ಧಾರವಾಡ: ಮುಖ್ಯಮಂತ್ರಿ ಬದಲಾವಣೆ ವಿಚಾರ ಬಿಜೆಪಿಯ ಆಂತರಿಕ ಸಮಸ್ಯೆ. ಅದರ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಆದರೆ, ಕೊರೊನಾ ಸಂದರ್ಭದಲ್ಲಿ ಈ ರೀತಿಯ ಚರ್ಚೆಗಳು ನಡೆಯಬಾರದು ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಜನ ಸಂಕಷ್ಟದಲ್ಲಿದ್ದಾರೆ. ಜನರ ಕಷ್ಟಗಳಿಗೆ ಸರ್ಕಾರ ಸ್ಪಂದಿಸಬೇಕಿತ್ತು. ಅದನ್ನು ಬಿಟ್ಟು ಮುಖ್ಯಮಂತ್ರಿ ಬದಲಾವಣೆ ವಿಚಾರ ಮಾಡುತ್ತಿರುವುದು ನಿಜಕ್ಕೂ ತಲೆತಗ್ಗಿಸುವ ವಿಚಾರ ಎಂದರು.

ಈ ರಾಜ್ಯ ಸರ್ಕಾರ ಕೇವಲ ಘೋಷಣೆಗಳ ಸರ್ಕಾರ ಆಗಿದೆ. ಕಾರ್ಮಿಕರಿಗೆ ಪರಿಹಾರ ಸಿಗಬೇಕು ಎಂದರೆ ಸಾಕಷ್ಟು ತೊಡಕುಗಳನ್ನು ಮಾಡಲಾಗಿದೆ. ಈ ಸರ್ಕಾರದ ಆಡಳಿತ ವ್ಯವಸ್ಥೆಯೇ ಹಾಳಾಗಿ ಹೋಗಿದೆ ಎಂದರು.

Reach Count: 
97174