Public News

News Subject: 
ಗೋಕಾಕ- ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರಧಾನಿ ಮೋದಿಯನ್ನು ಸನ್ಮಾನಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
Video Thumbnail: 
PublicNext--515218--node-nid
Category: 
Politics
Body: 

ಗೋಕಾಕ- ಪೆಟ್ರೋಲ್ 100 ನಾಟೌಟ್" ಹೋರಾಟದ ಭಾಗವಾಗಿ ಗೋಕಾಕನಲ್ಲಿ ಇಂದು, ಕೆಪಿಸಿಸಿ ಅಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಿಂದ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

ತೈಲ ಬೆಲೆ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ, ಪ್ರಧಾನಿ ನರೇಂದ್ರ ಮೋದಿ ವೇಷಧಾರಿಯನ್ನು ಸತೀಶ ಜಾರಕಿಹೊಳಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸನ್ಮಾನಿಸಿದರು. ಮಹಿಳಾ ಕಾರ್ಯಕರ್ತರು ಮೋದಿ ವೇಷಧಾರಿಗೆ ಆರುತಿ ಎತ್ತಿ ತಿಲಕ ಹಚ್ಚಿದರು. ತಾಂಬೂಲ ಕೂಡ ನೀಡಲಾಯಿತು. ಮೋದಿಗೆ ಜೈಕಾರ ಕೂಗಿ, ವ್ಯಂಗ್ಯ ಮಾಡಲಾಯಿತು.

ಕಾರ್ಯಕರ್ತರು ಎತ್ತಿನ ಬಂಡಿ ಚಲಾಯಿಸುವ ಮೂಲಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿದರು. ಪೆಟ್ರೋಲ್ ಬಂಕ್ ನಲ್ಲಿ ಮೋದಿ ವೇಷಧಾರಿಯಿಂದ ವಾಹನಗಳಿಗೆ ಪೆಟ್ರೋಲ್ ತುಂಬಿಸಲಾಯಿತು. "ಎಲ್ಲಿಗೆ ಬಂತು ಅಚ್ಛೇದಿನ್, ಪೆಟ್ರೋಲ್ ಸೆಂಚುರಿ ಬಾರ್ಸೋವರೆಗೂ ಬಂತು", "ಮೋದಿ ವೈರಸ್" ಸೇರಿ ಇನ್ನಿತರೇ ಬರಹಗಳಿರುವ ಭಿತ್ತಿಪತ್ರಗಳನ್ನು ಹಿಡಿದು, ಕೇಂದ್ರ ಸರ್ಕಾರ ಹಾಗೂ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.

Reach Count: 
42322