Kshetra Samachara
Local News Subject:
ಕಾರ್ಕಳ: ಒಂದೇ ದಿನದಲ್ಲಿ ಸಹೋದರರಿಬ್ಬರು ಮೃತ್ಯು- ಸಾವಲ್ಲೂ ಒಂದಾದ ಅಣ್ಣ-ತಮ್ಮ
City:
Udupi
Mangalore
Upload Image:
Category:
Others
Body:
ಕಾರ್ಕಳ: ಒಂದೇ ದಿನದಲ್ಲಿ ಸಹೋದರರಿಬ್ಬರು ಮೃತಪಟ್ಟ ಘಟನೆ ಇಂದು (ಜೂ.14) ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದ್ದು, ಸಾವಿನಲ್ಲೂ ಅಣ್ಣ-ತಮ್ಮ ಒಂದಾಗಿದ್ದಾರೆ.
ಸಾಣೂರು ನಿವಾಸಿ ಮಿಯಾರು ಗುಂಡಾಜೆ ಬಳಿಯ ರಾಜಾರಾಮ ರಾವ್ (55) ಅವರು ಇತ್ತೀಚೆಗೆ ಅಪಘಾತಕ್ಕೆ ಒಳಗಾಗಿದ್ದು, ಮಣಿಪಾಲ ಸೇರಿದಂತೆ ಅನೇಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಅಂತಿಮವಾಗಿ ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಮೃತಪಟ್ಟರೆ, ಸಹೋದರ ಸಾಣೂರು ಚಿಕ್ಕಬೆಟ್ಟು ನಿವಾಸಿ ಗಣೇಶ್ ರಾವ್ (60) ಸಂಜೆ ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.
Reach Count:
9462