Public News

News Subject: 
ಶಾಸಕರೊಬ್ಬರು ಫೋನ್ ಮಾಡಿ ನಾನೇ ಸಿಎಂ, ಸಹಕಾರ ಕೊಡಿ ಅಂದ್ರು: ರೇಣುಕಾಚಾರ್ಯ ಬಾಂಬ್
Upload Image: 
PublicNext--515335--node-nid
Category: 
Politics
Body: 

ದಾವಣಗೆರೆ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಕ್ಷಣ ಕ್ಷಣಕ್ಕೂ ಬಿಗ್‌ ಟ್ವಿಸ್ಟ್ ಸಿಗುತ್ತಿದೆ. ಈ ಮಧ್ಯೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ತಮ್ಮದೇ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ್ ಬೆಲ್ಲದ್ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು. "ವಿಜಯಪುರದ ಶಾಸಕ ಫೋನ್ ಮಾಡಿ ನಾನೇ ಮುಖ್ಯಮಂತ್ರಿ ಸಹಕಾರ ಕೊಡಿ ಎಂದಿದ್ದಾರೆ. ವಿಜಯಪುರ ಶಾಸಕ ಕೆಲ ಎಮ್ಎಲ್ಎಗಳಿಗೆ ಫೋನ್ ಮಾಡಿದ್ದಾರೆ. ನಾನೇ ಮುಂದಿನ ಸಿಎಂ ನನಗೆ ಬೆಂಬಲ ನೀಡಿ ಎಂದಿದ್ದಾರೆ. ಹೈಕಮಾಂಡ್​ನಿಂದ ಸ್ಪಷ್ಟ ಸೂಚನೆ ಬಂದಿದ್ದರೂ ಈ ರೀತಿ ಮಾತನಾಡ್ತಾರೆ" ಎಂದು ಗುಡುಗಿದರು.

Reach Count: 
18295