Public News

News Subject: 
ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಬೆಟ್ಟೇಗೌಡ ಪದಚ್ಯುತಿ
Upload Image: 
Body: 

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಡಿ.ಎನ್​. ಬೆಟ್ಟೇಗೌಡ ಅವರನ್ನು ಪದಚ್ಯುತಗೊಳಿಸಲಾಗಿದೆ. ಈ ಮೂಲಕ ಬೆಟ್ಟೇಗೌಡ ಅವರ ಒಂದುವರೆ ವರ್ಷದ ಆಡಳಿತ ಅಂತ್ಯವಾಗಿದೆ.

ಸೋಮವಾರ ಒಕ್ಕಲಿಗರ ಸಂಘದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಜುಲೈ 18 ರಂದು ಸಂಘದ 19 ನಿರ್ದೇಶಕರು ಅವಿಶ್ವಾಸ ನಿರ್ಣಯ ಮಂಡಿಸಿದ್ದರು. 7 ದಿನಗಳ ಒಳಗಾಗಿ ವಿಶ್ವಾಸ ಮತ ಸಾಬೀತು ಪಡಿಸುವಂತೆ ಪಟ್ಟು ಹಿಡಿದಿದ್ದರು. ಆದರೆ ಬೆಟ್ಟೇಗೌಡ ವಿಶ್ವಾಸ ಮತ ಸಾಬೀತು ಪಡಿಸುವಲ್ಲಿ ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ಬೆಟ್ಟೇಗೌಡ ಅವರನ್ನು ಪದಚ್ಯುತಗೊಳಿಸಲಾಗಿದೆ ಎಂದು ನಿರ್ದೇಶಕ ಶಿವಲಿಂಗಯ್ಯ ತಿಳಿಸಿದ್ದಾರೆ.

ಸಭೆಯಲ್ಲಿ ಹಂಗಾಮಿ ಕಾರ್ಯದರ್ಶಿಯಾಗಿ ನಾರಾಯಣಮೂರ್ತಿ ಅವರನ್ನು ನೇಮಕ ಮಾಡಲಾಗಿದೆ. ಅಗಸ್ಟ್ 7 ನೇ ತಾರೀಖಿನಂದು ಹೊಸ ಅಧ್ಯಕ್ಷರ ಆಯ್ಕೆ ನಡೆಯಲಿದೆ.

Reach Count: 
1