Public News

News Subject: 
ಉತ್ತರ ಕರ್ನಾಟಕದ 13 ಜಿಲ್ಲೆಗಳ ಬಂದ್ ಇಲ್ಲ
Upload Image: 
Body: 

ಉತ್ತರ ಕರ್ನಾಟಕ ಕಡೆಗಣಿಸಿದ್ದನ್ನು ವಿರೋಧಿಸಿ ಗುರುವಾರ ನಡೆಸಲು ಉದ್ದೇಶಲಾಗಿದ್ದ 13 ಜಿಲ್ಲೆಗಳ ಬಂದ್‌ ಕರೆ ಹಿಂಪಡೆಯಲಾಗಿದೆ. ಉತ್ತರ ಕರ್ನಾಟಕ ಅಭಿವೃದ್ಧಿಗೆ ಆಗ್ರಹಿಸಿ ಸಾಂಕೇತಿಕ ಪ್ರತಿಭಟನೆ ಮಾತ್ರ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಬಂದ್ ಕೈಬಿಟ್ಟಿರುವ ವಿಷಯವನ್ನು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಕೊತಂಬ್ರಿ ತಿಳಿಸಿದ್ದಾರೆ.

ಬುಧವಾರ ಸಂಜೆ ಹಾವೇರಿಯಲ್ಲಿ ಮಾತನಾಡಿದ ಅವರು, ನಮ್ಮ ಬೇಡಿಕೆ ಈಡೇರಿಸಲು 15 ದಿನಗಳ ಕಾಲಾವಕಾಶ ಬೇಕು ಎಂದು ಹೇಳಿದದ್ದಾರೆ ಮುಖ್ಯಮಂತ್ರಿ ಕುಮಾರಸ್ವಾಮಿ. ಈ ಭರವಸೆ ಹಿನ್ನೆಲೆಯಲ್ಲಿ ಬಂದ್ ಕೈಬಿಡಲು ನಿರ್ಧರಿಸಲಾಗಿದೆಯೇ ವಿನಃ ಪ್ರತ್ಯೇಕ ರಾಜ್ಯದ ಹೋರಾಟ ಕೈಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 15 ದಿನಗಳ ಕಾಲಾವಧಿಯಲ್ಲಿ ಬೆಳಗಾವಿ ಸುವರ್ಣ ಸೌಧದಲ್ಲಿ ಸಭೆ ಕರೆದು ಸಮಗ್ರ ಚರ್ಚೆ ನಡೆಸದಿದ್ದಲ್ಲಿ ಚಳವಳಿ ಮುಂದುವರಿಸುವುದಾಗಿ ಅವರು ಸೋಮಶೇಖರ ತಿಳಿಸಿದರು.

Reach Count: 
1