Public News
News Subject:
ಪಾಲಂ ವಾಯು ನೆಲೆಯಲ್ಲಿ ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್
Category:
Law and Order
Body:
ನವದೆಹಲಿ: ಪುಲ್ವಾಮಾ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ನ 40 ಯೋಧರ ಪಾರ್ಥಿವ ಶರೀರಗಳನ್ನು ದೆಹಲಿಯ ಪಾಲಂ ವಾಯು ನೆಲೆಗೆ ತರಲಾಗಿದೆ. ಇಲ್ಲಿಗೆ ಆಗಮಿಸಿದ ಸೇನಾಪಡೆಯ ಅಧಿಕಾರಿಗಳು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಒಬ್ಬೊಬ್ಬರಾಗಿ ಆಗಮಿಸಿದ ಗಣ್ಯರು ಶವಪೆಟ್ಟಿಗೆಗಳ ಎದುರಿಗೆ ಇರಿಸಲಾಗಿದ್ದ ಟೇಬಲ್ ಮೇಲೆ ಹೂಗುಚ್ಛವನ್ನಿರಿಸಿ ನಮನ ಸಲ್ಲಿಸಿದರು. ಬಳಿಕ ಹುತಾತ್ಮ ಯೋಧರ ಪಾರ್ಥಿವ ಶರೀರಗಳನ್ನು ಅವರವರ ಊರುಗಳಿಗೆ ರವಾನಿಸಲಾಯಿತು.
Reach Count:
1