Public News

News Subject: 
ಪಾಲಂ ವಾಯು ನೆಲೆಯಲ್ಲಿ ಹುತಾತ್ಮ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್​
Category: 
Law and Order
Body: 

ನವದೆಹಲಿ: ಪುಲ್ವಾಮಾ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿಆರ್​ಪಿಎಫ್​ನ 40 ಯೋಧರ ಪಾರ್ಥಿವ ಶರೀರಗಳನ್ನು ದೆಹಲಿಯ ಪಾಲಂ ವಾಯು ನೆಲೆಗೆ ತರಲಾಗಿದೆ. ಇಲ್ಲಿಗೆ ಆಗಮಿಸಿದ ಸೇನಾಪಡೆಯ ಅಧಿಕಾರಿಗಳು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ರಾಜನಾಥ್​ ಸಿಂಗ್​, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​, ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಮತ್ತು ದೆಹಲಿ ಸಿಎಂ ಅರವಿಂದ ಕೇಜ್ರೀವಾಲ್​ ಸೇರಿ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಒಬ್ಬೊಬ್ಬರಾಗಿ ಆಗಮಿಸಿದ ಗಣ್ಯರು ಶವಪೆಟ್ಟಿಗೆಗಳ ಎದುರಿಗೆ ಇರಿಸಲಾಗಿದ್ದ ಟೇಬಲ್​ ಮೇಲೆ ಹೂಗುಚ್ಛವನ್ನಿರಿಸಿ ನಮನ ಸಲ್ಲಿಸಿದರು. ಬಳಿಕ ಹುತಾತ್ಮ ಯೋಧರ ಪಾರ್ಥಿವ ಶರೀರಗಳನ್ನು ಅವರವರ ಊರುಗಳಿಗೆ ರವಾನಿಸಲಾಯಿತು.

Reach Count: 
1