Public News
News Subject:
ಮುಂದಿನ ಸಲ ದಲಿತ ಸಿಎಂ ಅಂತ ಘೋಷಿಸಿ: ಕಾಂಗ್ರೆಸ್ ಗೆ ಬಿಜೆಪಿ ಸವಾಲು
Upload Image:
Category:
Politics
Body:
ಬೆಂಗಳೂರು: ನಾಡಿನ ದಲಿತ ಸಮುದಾಯದ ಬಗ್ಗೆ ಕಾಂಗ್ರೆಸ್ ನಾಯಕರಿಗೆ ನೈಜ ಕಾಳಜಿ ಇದ್ದಲ್ಲಿ ಈಗಲೇ ಮುಂದಿನ ಸಿಎಂ ಅಭ್ಯರ್ಥಿ ದಲಿತ ವ್ಯಕ್ತಿ ಎಂದು ಘೋಷಿಸಲಿ ಎಂದು ಬಿಜೆಪಿ ಸವಾಲು ಎಸೆದಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ದಲಿತನೊಬ್ಬ ಮುಖ್ಯಮಂತ್ರಿ ಆಗಬಾರದು ಎಂದು ಜಿ.ಪರಮೇಶ್ವರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದ ಸಿದ್ದರಾಮಯ್ಯ ಈಗ ದಲಿತರ ಬಗ್ಗೆ ಪ್ರೇಮ ತೋರಿಸುತ್ತಿದ್ದಾರೆ ಎಂದು ಕುಟುಕಿದೆ. ಬಿಜೆಪಿ ಮುಂದಿನ ಮುಖ್ಯಮಂತ್ರಿಯನ್ನು ದಲಿತ ಸಮುದಾಯಕ್ಕೆ ಸೇರಿದವರನ್ನು ಮಾಡಲಿ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಈ ರೀತಿ ಪ್ರತಿಕ್ರಿಯಿಸಿದೆ.
Reach Count:
41707
Show Detail Screen Advertisement:
Yes