Public News
ಹಿರಿಯೂರು: ಸಚಿವ ಸಂಪುಟ ಸಭೆಯಲ್ಲಿ ಹಿರಿಯೂರು ತಾಲ್ಲೂಕಿನ ಧರ್ಮಪುರ ಕೆರೆಗೆ ನೀರು ಹರಿಸಲು ಸರ್ಕಾರದಿಂದ ಗ್ರೀನ್ ಸಿಗ್ನಲ್ ದೊರೆತಿದ್ದು ಮುಂದಿನ ವರ್ಷದ ಆಗಸ್ಟ್ ತಿಂಗಳಲ್ಲಿ ಕೆರೆಗೆ ನೀರು ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ರೈತರು ಹಮ್ಮಿಕೊಂಡಿದ್ದ ಶಾಸಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ ಎಂದರು. ಧರ್ಮಪುರ ಹೋಬಳಿಯ ಭಾಗದ ಜನರು 102 ವರ್ಷಗಳ ಬಹುಬೇಡಿಕೆ ಈಡೆರುವ ಕಾಲ ಸನ್ನೀಹಿತವಾಗಿದೆ. ವಿವಿ ಸಾಗರದಿಂದ ಕೆರೆಗೆ ನೀರು ಹರಿಸಲು 90 ಕೋಟಿ ರೂಪಾಯಿ ಬಿಡುಗಡೆಯಾಗಿದ್ದು ಮೊದಲ ಹಂತದ ಕಾಮಗಾರಿಗೆ 40 ಕೋಟಿ, ರೂಪಾಯಿ ಬಿಡುಗಡೆಯಾಗುತ್ತದೆ. ಅತಿ ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು ಕಾಮಗಾರಿ ಪ್ರಾರಂಭವಾಗಲಿದೆ ಎಂದರು.
ಹಿಂದಿನ ಶಾಸಕರಿಗೆ ಬದ್ಧತೆ ಇದ್ದಿದ್ದರೆ ಇಷ್ಟೋತ್ತಿಗೆ ಧರ್ಮಪುರ ಕೆರೆಗೆ ನೀರು ಬರುತ್ತಿತ್ತು, ಬದ್ಧತೆ ಇಲ್ಲದಕ್ಕೆ ನೀರು ಬಂದಿಲ್ಲ, ಧರ್ಮಪುರ ಕೆರೆಗೆ ಬಗ್ಗೆ ಅವರಿಗೆ ಮಾತನಾಡಲು ನೈತಿಕತೆ ಇಲ್ಲ ಎಂದು ಮಾಜಿ ಸಚಿವ ಡಿ. ಸುಧಾಕರ್ ಗೆ ಟಾಂಗ್ ನೀಡಿದರು. ಇದೆಲ್ಲದೆ ಹಲವಾರು ರಾಜಕೀಯ ವಿಚಾರಗಳನ್ನು ಮುಂದಿನ ದಿನಗಳಲ್ಲಿ ರಾಜಕೀಯ ಸಭೆಗಳಲ್ಲಿ ಏನು ಉತ್ತರ ಕೊಡಬೇಕೋ, ಕೊಡುತ್ತೇನೆ ಎಂದು ಶಾಸಕರು ತಿಳಿಸಿದರು.