Public News

News Subject: 
ಹುಬ್ಬಳ್ಳಿ: ರಾಜ್ಯ ರಾಜಕಾರಣದ ಬಗ್ಗೆ ಪ್ರತಿಕ್ರಿಯೆ ನೀಡಲ್ಲ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ...!
Category: 
Politics
Body: 

ಹುಬ್ಬಳ್ಳಿ: ರಾಜ್ಯ ರಾಜಕಾರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮುಖ್ಯಮಂತ್ರಿಗಳು ಈಗಾಗಲೇ ತಮ್ಮ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಮತ್ತು ಕೇಂದ್ರ ನಾಯಕರ ಮಧ್ಯೆ ಏನು ಮಾತುಕತೆ ನಡೆದಿದೆ ಅದರ ವಿವರ ನನಗೆ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ವರಿಷ್ಠರ ಜೊತೆಗೆ ಏನೇ ಮಾತುಕತೆ ನಡೆದಿದ್ದರು, ಯಡಿಯೂರಪ್ಪ ಹಾಗೂ ಕೇಂದ್ರ ನಾಯಕರಿಗೆ ಮಾತ್ರ ಗೊತ್ತು. ನನ್ನನ್ನು ಮುಖ್ಯಮಂತ್ರಿ ಮಾಡುತ್ತಾರೆ ಎಂಬ ಬಗ್ಗೆ ಯಾರು ನನ್ನ ಜೊತೆ ಚರ್ಚೆ ಮಾಡಿಲ್ಲ ಎಂದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿದ್ದಾರೆ, ನರೇಂದ್ರ ಮೋದಿ‌ ಇದ್ದಾರೆ ನಿರ್ಧಾರ ಅವರು ತೆಗೆದುಕೊಳ್ಳುತ್ತಾರೆ ಎಂದ ಅವರು, ಮುಖ್ಯಮಂತ್ರಿ ನೀವು ಆಗ್ತೀರಾ..? ಎಂಬ ಪ್ರಶ್ನೆಗೆ ನೀವೆ ಹೇಳಬೇಕು ಎಂದು ನಕ್ಕು ಸುಮ್ಮನಾಗಿದ್ದಾರೆ.

ಇನ್ನೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ತುಟಿಬಿಚ್ಚದ ಪ್ರಹ್ಲಾದ್ ಜೋಶಿ, ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ನಾನು ಸೂಕ್ತ ವ್ಯಕ್ತಿ ಅಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Reach Count: 
30280
Show Detail Screen Advertisement: 
Yes