Public News

News Subject: 
ಹುಬ್ಬಳ್ಳಿ: ನಾಯಕತ್ವ ಬದಲಾವಣೆ ಬಗ್ಗೆ ಏನು ಮಾತನಾಡುವುದಿಲ್ಲ ವೈಟ್ ಆ್ಯಂಡ್ ಸಿ: ಸಚಿವ ಶೆಟ್ಟರ್...!
Category: 
Politics
Body: 

ಹುಬ್ಬಳ್ಳಿ: ಸಿಎಂ ಬದಲಾವಣೆ ವಿಚಾರದಲ್ಲಿ ಈಗಾಗಲೇ ಸಿಎಂ ಯಡಿಯೂರಪ್ಪ ಹೇಳಿಕೆ‌ ನೀಡಿದ್ದಾರೆ. ಪಕ್ಷ ಹಾಗೂ ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ತಾರೆ ಎಂಬುದು ಸ್ಪಷ್ಟತೆ ಇಲ್ಲ. ಈಗ ಕಾದು ನೋಡಬೇಕಷ್ಟೇ, ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ನಾಯಕತ್ವ ಬದಲಾವಣೆ ಕುರಿತು ಮಾತನಾಡಿದ ಅವರು, ನಾನು ಯಾವುದೇ ರಾಜಕೀಯ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಹೋಗಿರಲಿಲ್ಲ.ಗುಜರಾತ್- ದೆಹಲಿ ಬೇಟಿ ಕೇವಲ ಇಲಾಖೆ ವಿಚಾರಕ್ಕೆ‌ ಹೋಗಿದ್ದು, ರಾಮನಾಥ ಸಿಂಗ್ ಭೇಟಿ ಮಾಡಿದ್ದು ಸಹ ಇಲಾಖೆ ಕೆಲಸಕ್ಕೆ. ರಕ್ಷಣಾ ಇಲಾಖೆ ಕ್ಲಸ್ಟರ್ ನೀಡುವ ಕುರಿತು ಚರ್ಚಿಸಿದ್ದೇನೆ ಎಂದರು.

ಸಂಪುಟದಿಂದ ಶೆಟ್ಟರ್ ಕೈಬಿಡುವ ವಿಚಾರವಾಗಿ ಮಾತನಾಡಿದ ಅವರು, ನಳಿನ್ ಕುಮಾರ್ ಕಟಿಲ್ ಈಗಾಗಲೇ ಆಡಿಯೋ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ಆಡಿಯೋ ಬಗ್ಗೆ ತನಿಖೆ‌ ನಡೆಯುತ್ತಿದೆ, ಈಗಲೇ ನಾನು ಏನನ್ನೂ ಮಾತನಾಡುವುದಿಲ್ಲ ಎಂದು ಅವರು ಹೇಳಿದರು.

Reach Count: 
35866
Show Detail Screen Advertisement: 
Yes