Kshetra Samachara

Local News Subject: 
ಕಿನ್ನಿಗೋಳಿ: ಸಾಧಕರಿಗೆ ಸನ್ಮಾನ ಶ್ಲಾಘನೀಯ: ಉಮಾನಾಥ ಕೋಟ್ಯಾನ್
City: 
Udupi
Mangalore
Video Thumbnail: 
PublicNext--552687--node-nid
Category: 
Cultural Activity
Body: 

ಮುಲ್ಕಿ: ಕಿನ್ನಿಗೋಳಿಯ ಯುಗಪುರುಷದ ಸಂಸ್ಥಾಪಕರಾದ ದಿ. ಕೋ ಉಡುಪರ ಸಂಸ್ಮರಣಾ ಸಮಾರಂಭ ಕಿನ್ನಿಗೋಳಿಯ ಯುಗಪುರುಷ ದಲ್ಲಿ ಸರಳ ರೀತಿಯಲ್ಲಿ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಕಸಾಪ ಮಾಜೀ ಅಧ್ಯಕ್ಷರಾದ ಹರಿಕೃಷ್ಣ ಪುನರೂರು ವಹಿಸಿದ್ದರು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸುವ ಕಾರ್ಯ ಶ್ಲಾಘನೀಯ ಎಂದರು.ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ ಆಶೀರ್ವಚನ ನೀಡಿದರು.

ಸಮಾರಂಭದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಉದ್ಯಮಿಗಳಾದ ಶ್ರೀಪತಿ ಭಟ್ ಮೂಡಬಿದ್ರೆ, ಪೃಥ್ವಿರಾಜ ಆಚಾರ್ಯ ಕಿನ್ನಿಗೋಳಿ, ಯುಗಪುರುಷ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ, ಯಕ್ಷ ಲಹರಿಯ ಗುರುಪ್ರಸಾದ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಯುಗಪುರುಷ ಸಂಸ್ಥಾಪಕ ದಿ. ಕೋ ಉಡುಪರ ಸಂಸ್ಮರಣಾ ಪ್ರಶಸ್ತಿಯನ್ನು ಕವಿ ಹಾಗೂ ಸಾಹಿತಿ ಸುಬ್ರಾಯ ಚೊಕ್ಕಾಡಿ ಯವರಿಗೆ ನೀಡಿ ಸನ್ಮಾನಿಸಲಾಯಿತು. ವೇದ ವಿದ್ವಾಂಸರ ನೆಲೆಯಲ್ಲಿ ಪಕ್ಷಿಕೆರೆ ಸುರಗಿರಿ ದೇವಸ್ಥಾನದ ಪ್ರಧಾನ ಅರ್ಚಕ ವಿಶ್ವೇಶ್ ಭಟ್ ರವರನ್ನು ಗೌರವಿಸಲಾಯಿತು.ಸಾಹಿತಿ ಎಂವಿ ಭಟ್ ರವರ "ಸುಖ ಜೀವನಕ್ಕೆ ಸರಳ ಮಾರ್ಗ"ಕೃತಿಯನ್ನು ಬಿಡುಗಡೆ ಮಾಡಲಾಯಿತು.ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ ಸ್ವಾಗತಿಸಿದರು.ಅನುಷ ಕರ್ಕೇರಾ ಧನ್ಯವಾದ ಅರ್ಪಿಸಿದರು. ಪತ್ರಕರ್ತ ಶರತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Reach Count: 
9334
Show Detail Screen Advertisement: 
Yes