Public News
News Subject:
ಉದ್ಯಮಿಯಿಂದ 5 ಲಕ್ಷ ರೂ.ಗೆ ಡಿಮ್ಯಾಂಡ್; ಕ್ರೈಂ ಇನ್ಸ್ಪೆಕ್ಟರ್ ಸೇರಿ ಮೂವರ ವಿರುದ್ಧ ಕೇಸ್
Upload Image:
Category:
Crime
Body:
ಬೆಂಗಳೂರು: ಉದ್ಯಮಿ ಗೋಪಿನಾಥ್ ಎಂಬುವರಿಂದ 5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟ ಆರೋಪದ ಮೇಲೆ ವೈಟ್ ಫೀಲ್ಡ್ ಕ್ರೈಂ ಇನ್ಸ್ಪೆಕ್ಟರ್ ರೇಣುಕಾ, ಎಸ್ಐ ಗಣೇಶ್ ಹಾಗೂ ಕಾನ್ಸ್ಟೇಬಲ್ ಹೇಮಂತ್ ವಿರುದ್ಧ ಎಸಿಬಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿಸಬಾರದು ಎಂದರೆ 10 ಲಕ್ಷ ರೂ. ಕೊಡಬೇಕು ಎಂದು ಡಿಮ್ಯಾಂಡ್ ಮಾಡಿದ್ದರು ಎಂದು ಆರೋಪ ಕೇಳಿ ಬಂದಿದೆ. ಉದ್ಯಮಿ ಗೋಪಿನಾಥ್ ಅವರನ್ನು ಬ್ಯಾಂಕಿಗೆ ಕರೆದೊಯ್ದು ಬಲವಂತವಾಗಿ 5 ಲಕ್ಷ ರೂಪಾಯಿಗಳನ್ನ ಡ್ರಾ ಮಾಡಿಸಿ. ಉಳಿದ 5 ಲಕ್ಷ ರೂಪಾಯಿಗೆ ಸಮಯ ನೀಡಿ ಕಿರುಕುಳ ನೀಡುತ್ತಿದ್ದರು ಎಂದು ಗೋಪಿನಾಥ್ ಎಸಿಬಿಗೆ ದೂರು ನೀಡಿದ್ದರು. ಇದರ ಅನ್ವಯ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು ರೇಣುಕಾ ಸೇರಿದಂತೆ ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ.
Reach Count:
18544
Show Detail Screen Advertisement:
Yes