Public News
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಪಟ್ಟಕ್ಕಾಗಿ ನಾನು ಫ್ರಂಟ್ ರನ್ನರ್ ಅಲ್ಲ, ಬ್ಯಾಕ್ ರನ್ನರ್ ಕೂಡ ಅಲ್ಲ.
ಈ ಬಗ್ಗೆ ನಮ್ಮ ಪಕ್ಷದ ವರಿಷ್ಠರು ನನ್ನ ಜೊತೆಗೆ ಯಾವುದೇ ಚರ್ಚೆ ಮಾಡಿಲ್ಲ. ಯಡಿಯೂರಪ್ಪ ಅವರಿಗೆ ರಾಜೀನಾಮೆ ಕೊಡಿ ಎಂದು ಹೇಳಿದ್ದಾರೊ, ಬಿಟ್ಟಿದ್ದಾರೊ ಗೊತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು..
ಸಿಎಂ ರೇಸ್ ನಲ್ಲಿ ಕೇಂದ್ರ ಸಚಿವ ಜೋಶಿಯವರ ಹೆಸರು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮುಖ್ಯಮಂತ್ರಿಗಳು ಈಗಾಗಲೇ ತಮ್ಮ ಹೇಳಿಕೆ ನೀಡಿದ್ದಾರೆ. ಯಡಿಯೂರಪ್ಪ ಮತ್ತು ಕೇಂದ್ರ ನಾಯಕರ ಮಧ್ಯೆ ಏನು ಮಾತುಕತೆ ನಡೆದಿದೆ ಅದರ ವಿವರ ನನಗೆ ಗೊತ್ತಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿದ್ದಾರೆ, ನರೇಂದ್ರ ಮೋದಿ ಇದ್ದಾರೆ ನಿರ್ಧಾರ ಅವರು ತೆಗೆದುಕೊಳ್ಳುತ್ತಾರೆ ಎಂದರು.
ಪಾರ್ಲಿಮೆಂಟ್ ನಲ್ಲಿ ಚರ್ಚೆ ನಡೆಯಲು ವಿಪಕ್ಷಗಳು ಬಿಡುತ್ತಿಲ್ಲ. ನಾವು ಎಲ್ಲಾ ರೀತಿಯ ಚರ್ಚೆಗಳಿಗೆ ಸಿದ್ಧರಿದ್ದೇವೆ. ಚರ್ಚೆ ನಡೆಸಲು ಸಿದ್ಧ ಎಂದು ಎಲ್ಲ ವಿಪಕ್ಷಗಳ ಜತೆಗೆ ನಡೆಸಿದ ಸಭೆಯಲ್ಲಿ ಕೋರಿದ್ದೇನೆ ಆದಾಗ್ಯೂ ಅವರು ಕಲಾಪ ನಡೆಸಲು ಬಿಡುತ್ತಿಲ್ಲ. ಸೋಮವಾರದಿಂದಲಾದರೂ ಚರ್ಚೆ ನಡೆಸಲು ಅವಕಾಶ ಕೊಡುತ್ತಾರೊ ಗೊತ್ತಿಲ್ಲ ಎಂದು ಅವರು ಹೇಳಿದರು.