Kshetra Samachara

Local News Subject: 
ಗರೀಬ್ ಕಲ್ಯಾಣ ಯೋಜನೆ ಪ್ರಗತಿ ಪರಿಶೀಲಿಸಿದ ಜೋಶಿ
City: 
Hubballi-Dharwad
Upload Image: 
PublicNext--552873--node-nid
Category: 
Politics
Body: 

ಧಾರವಾಡ: ಧಾರವಾಡದ ಶ್ರೀನಗರದಲ್ಲಿರುವ ಬಲರಾಮ್ ಕುಸುಗಲ್ ಅವರ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಗರೀಬ್ ಕಲ್ಯಾಣ ಯೋಜನೆಯ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಲಾಕ್‌ ಡೌನ್ ಸಂದರ್ಭದಲ್ಲಿ ಬಡವರು ಹಸಿವಿನಿಂದ ಬಳಲಬಾರದು ಎಂದು ಕೇಂದ್ರ ಸರ್ಕಾರ ಈ ಗರೀಬ್ ಕಲ್ಯಾಣ ಯೋಜನೆ ಜಾರಿಗೆ ತಂದು ಬಡ ಕುಟುಂಬಗಳಿಗೆ ಹೆಚ್ಚಿನ ಪಡಿತರ ವಿತರಿಸುವುದು ಈ ಯೋಜನೆ ಉದ್ದೇಶವಾಗಿದೆ.

ಇಂದು ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿದ ಸಚಿವರು, ಅಂಗಡಿಯಿಂದ ಬಡವರಿಗೆ ಸರ್ಕಾರದ ಯೋಜನೆ ತಲುಪುತ್ತಿದೆಯೇ? ಎಂಬುದರ ಕುರಿತು ಮಾಹಿತಿ ಪಡೆದುಕೊಂಡರು. ಸಚಿವರಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ತಹಶೀಲ್ದಾರ ಸಂತೋಷ ಬಿರಾದಾರ, ಮಾಜಿ ಶಾಸಕಿ ಸೀಮಾ ಮಸೂತಿ ಸೇರಿದಂತೆ ಅನೇಕರು ಸಾಥ್ ನೀಡಿದರು.

Reach Count: 
13362
Show Detail Screen Advertisement: 
Yes