Kshetra Samachara

Local News Subject: 
ಧಾರವಾಡ: ಹಳ್ಳದಲ್ಲಿ ಕೊಚ್ಚಿಕೊಂಡು ಹೋದವ ಶವವಾಗಿ ಪತ್ತೆ
City: 
Hubballi-Dharwad
Video Thumbnail: 
PublicNext--553130--node-nid
Category: 
Accident
Body: 

ಧಾರವಾಡ ತಾಲೂಕಿನ ಬೇಲೂರು ಗ್ರಾಮದ ಹಳ್ಳದ ಪ್ರವಾಹಕ್ಕೆ ಕೊಚ್ಚಿಕೊಂಡು ಹೋಗಿದ್ದ ವ್ಯಕ್ತಿಯೋರ್ವ ಇಂದು ಶವವಾಗಿ ಪತ್ತೆಯಾಗಿದ್ದಾನೆ.

ಖಾದರ್ ಭಾಷಾ ಖುರೇಶಿ (40) ಎಂಬಾತನೇ ಹಳ್ಳದ ಪ್ರವಾಹಕ್ಕೆ ಸಿಲುಕಿ ಮೃತಪಟ್ಟವನು. ಹುಬ್ಬಳ್ಳಿ ಮೂಲದವನಾದ ಈತ ಕೋಟೂರು ಗ್ರಾಮದಲ್ಲಿರುವ ತನ್ನ ಪತ್ನಿಯ ಮನೆಗೆ ಬಂದು 18 ರಿಂದ 20 ವರ್ಷಗಳಾಗಿದ್ದವು. ನಿನ್ನೆ ಬೇಲೂರು ಹಳ್ಳ ದಾಟುತ್ತಿದ್ದ ಸಂದರ್ಭದಲ್ಲಿ ಪ್ರವಾಹಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದ.

ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳದವರು ಹಾಗೂ ಗರಗ ಠಾಣೆ ಪೊಲೀಸರು ಭಾಷಾಸಾಬನ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದರು. ನಿನ್ನೆ ರಾತ್ರಿವರೆಗೂ ಕಾರ್ಯಾಚರಣೆ ನಡೆಸಲಾಗಿದ್ದರೂ ಆತ ಪತ್ತೆಯಾಗಿರಲಿಲ್ಲ. ಇಂದು ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ನಡೆಸುವ ವೇಳೆ ಭಾಷಾಸಾಬ್‌ನ ಮೃತದೇಹ ಮುಳ್ಳಿನ ಕಂಟಿಯಲ್ಲಿ ಸಿಲುಕಿಕೊಂಡಿತ್ತು. ಅಗ್ನಿಶಾಮಕ ದಳದವರು ಆ ಮೃತ ದೇಹವನ್ನು ಹೊರತೆಗೆದಿದ್ದಾರೆ.

ಘಟನಾ ಸ್ಥಳಕ್ಕೆ ಗರಗ ಠಾಣೆ ಪಿಎಸ್ಐ ಕಿರಣ್ ಮೋಹಿತೆ ಕೂಡ ಭೇಟಿ ನೀಡಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.

Reach Count: 
80780
Show Detail Screen Advertisement: 
Yes