Public News

News Subject: 
ರಾಜ್ಯ ಉಳಿಸಬೇಕಾದ್ರೆ ಕಾಂಗ್ರೆಸ್ಸನ್ನು ಕಿತ್ತೊಗೆಯಬೇಕು: ಸಿದ್ದರಾಮಯ್ಯ ಮತ್ತೆ ಎಡವಟ್ಟು
Upload Image: 
PublicNext--553168--node-nid
Category: 
Politics
Body: 

ತುಮಕೂರು: ರಾಜ್ಯವನ್ನು ಉಳಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ತೆಗೆಯಬೇಕು ಎಂದು ಹೇಳುವ ಮೂಲಕ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ಎಡವಟ್ಟು ಮಾಡಿಕೊಂಡಿದ್ದಾರೆ.

ನಗರದಲ್ಲಿ ಇಂದು ಐದು ಜಿಲ್ಲೆಗಳ ಪಕ್ಷದ ಮುಖಂಡರ ಸಭೆ ನಡೆಸಲಾಯಿತು. ಈ ವೇಳೆ ಮಾತಿನ ಬರದಲ್ಲಿ ಸಿದ್ದರಾಮಯ್ಯ ಅವರು ಎರಡು ಬಾರಿ ‘ಕಾಂಗ್ರೆಸ್ ಪಕ್ಷವನ್ನು ತೆಗೆಯಬೇಕು’ ಎಂದರು. ಸಿದ್ದರಾಮಯ್ಯ ಅವರ ಮಾತು ಕೇಳಿ ಸಭೆಯಲ್ಲಿದ್ದವರು ಕಕ್ಕಾಬಿಕ್ಕಿಯಾದರು. ಇದು ಸಿದ್ದರಾಮಯ್ಯ ಅವರ ಗಮನಕ್ಕೆ ಬರಲಿಲ್ಲ. ಕೊನೆಗೆ ಎಸ್.ಆರ್.ಪಾಟೀಲ್ ಅವರು ಕಾಂಗ್ರೆಸ್ ಅಲ್ಲ ಬಿಜೆಪಿ ತೆಗೆಯಬೇಕು ಎಂದು ಎಚ್ಚರಿಸಿದರು. ಬಳಿಕ ಸಾವರಿಸಿಕೊಂಡ ಸಿದ್ದರಾಮಯ್ಯ, ತಮ್ಮ ಭಾಷಣ ಮುಂದುವರಿಸಿ ಬಿಜೆಪಿ ವಿರುದ್ಧ ಹರಿಹಾಯ್ದರು.

Reach Count: 
55209
Show Detail Screen Advertisement: 
Yes