Kshetra Samachara
Local News Subject:
ನವಲಗುಂದ : ಶಿರೂರ ಗ್ರಾಮಕ್ಕೆ ಭೇಟಿ ನೀಡಿ ಬೆಳೆಹಾನಿ ವೀಕ್ಷಿಸಿದ ಶಾಸಕ ಮುನೇನಕೊಪ್ಪ
City:
Hubballi-Dharwad
Video:
Category:
Politics
Body:
ನವಲಗುಂದ : ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದ ಶಿರೂರ ಗ್ರಾಮದ ತುಪ್ಪರಿ ಹಳ್ಳದಲ್ಲಿ ಉಂಟಾದ ಪ್ರವಾಹದಿಂದ ರೈತರ ಜಮೀನುಗಳಲ್ಲಿ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆಗಳು ನಾಶವಾಗಿದ್ದು, ಈ ಹಿನ್ನಲೆ ಶನಿವಾರ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ, ಬೆಳೆಹಾನಿಯಾಗಿರುವ ಕುರಿತು ಸಮಗ್ರ ಮಾಹಿತಿ ಪಡೆದು ತುರ್ತು ಪರಿಹಾರ ಕ್ರಮ ಜರುಗಿಸುವಂತೆ ಸ್ಥಳದಲ್ಲಿ ಉಪಸ್ಥಿತರಿದ್ದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರರು, ಗ್ರಾಮದ ಗುರು-ಹಿರಿಯರು, ರೈತರು, ಮುಖಂಡರು, ವಿವಿಧ ಜನಪ್ರತಿನಿಧಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Reach Count:
23976
Show Detail Screen Advertisement:
Yes