Kshetra Samachara

Local News Subject: 
ಧಾರವಾಡ: ಹುಲ್ಲಿಕೇರಿ ಕೆರೆ ಬಗ್ಗೆ ಸಿಎಂ ಜೊತೆ ನಾಳೆ ಮಾತನಾಡುತ್ತೇನೆ: ಜೋಶಿ
City: 
Hubballi-Dharwad
Category: 
Politics
Body: 

ಧಾರವಾಡ: ಅಳ್ನಾವರ ತಾಲೂಕಿನ ಹುಲ್ಲಿಕೇರಿಯ ಇಂದಿರಮ್ಮನ ಕೆರೆ ಒಡೆದ ಬಗ್ಗೆ ನಾಳೆ ಸಿಎಂ ಯಡಿಯೂರಪ್ಪನವರೊಂದಿಗೆ ಮಾತನಾಡುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಹುಲ್ಲಿಕೇರಿ ಕೆರೆ ವೀಕ್ಷಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷ ಈ ಕೆರೆ ಅಭಿವೃದ್ಧಿಗೆ ನಾಲ್ಕೂವರೆ ಕೋಟಿ ಹಣ ಬಿಡುಗಡೆ ಮಾಡಬೇಕಿತ್ತು. ಆದರೆ, ವರ್ಕ ಆರ್ಡರ್ ಆದ ಮೇಲೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ. ಈ ಬಗ್ಗೆ ಸಿಎಂ ಜೊತೆ ನಾಳೆ ಬೆಳಗಾವಿಯಲ್ಲಿ ಮಾತನಾಡಿ ಆದಷ್ಟು ಬೇಗ ಸರ್ಕಾರದಿಂದ ಹಣ ಬಿಡುಗಡೆ ಮಾಡಿ ಮತ್ತೆ ಕೆರೆ ಸರಿಪಡಿಸಲಾಗುವುದು ಎಂದರು.

ಕೇಂದ್ರದ ಗೃಹ ಸಚಿವರನ್ನು ಭೇಟಿ ಮಾಡಿ ನಮ್ಮ ರಾಜ್ಯದ ಸಮಗ್ರ ಮಾಹಿತಿ ನೀಡುತ್ತೇನೆ. ನಮ್ಮ ರಾಜ್ಯಕ್ಕೆ ಕೇಂದ್ರದಿಂದ ಹಣ ಬಿಡುಗಡೆ ವಿಚಾರದಲ್ಲಿ ತಾರತಮ್ಯ ನಡೆದಿಲ್ಲ. ರಾಜ್ಯಕ್ಕೆ ಏನು ಬೇಕೋ ಅದನ್ನು ನೀಡುವಂತೆ ಕೇಂದ್ರಕ್ಕೆ ಪ್ರಸ್ತಾಪ ಮಾಡುತ್ತೇನೆ. 2019 ರ ಪ್ರವಾಹಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಕೇಂದ್ರದಿಂದ ಪರಿಹಾರ ಒದಗಿಸಲಾಗಿದೆ ಎಂದರು.

Reach Count: 
58472
Show Detail Screen Advertisement: 
Yes